ಜಮೀನಿನ ಸರ್ವೇಗೆ ಲಂಚಕ್ಕೆ ಬೇಡಿಕೆ ಇಟ್ಟು 2 ಲಕ್ಷ ಲಂಚ ಸ್ವೀಕರಿಸುವಾಗ ಇಬ್ಬರು ಸರ್ವೇ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಚಿಕ್ಕಮಗಳೂರು ತಾಲ್ಲೂಕಿನ ಸರ್ವೇಯರ್ ದೊರೆರಾಜ್ ಮತ್ತು ರಂಗನಾಥ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಜಮೀನಿನ ಸರ್ವೇಗೆ 2 ಲಕ್ಷ ಲಂಚ ಪಡೆಯುವಾಗ ಇಬ್ಬರು ಸರ್ವೇಯರ್ ಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕೃಷಿ ಜಮೀನಿನ ಸರ್ವೇ ಮಾಡಿ ಸ್ಕೆಚ್ ತಯಾರಿಸಲು 10 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ತಮ್ಮ ಖಾಸಗಿ ಕಚೇರಿಯಲ್ಲಿ ಎರಡು ಲಕ್ಷ ಪಡೆಯುವಾಗ ಲೋಕಾ ಬಲೆಗೆ ಬಿದ್ದಿದ್ದಾರೆ.
ಚಿಕ್ಕಮಗಳೂರು ನಗರದ ಹೊರವಲಯ ಇಂದಾವರ ಗ್ರಾಮದ ಧರಣೇಶ್ ಎಂಬುವವರಿಂದ ಲಂಚ ಪಡೆಯುವಾಗ ಸರ್ವೇಯರ್ ಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಸರ್ವೇಯರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರಿಂದ ಧರಣೇಶ್ ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು.
ಧರಣೇಶ್ ಅವರ ಕೃಷಿ ಜಮೀನು ಸರ್ವೆಗಾಗಿ 10 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಸರ್ವೇಯರ್ ಮುಂಗಡ ಎರಡು ಲಕ್ಷ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಚಿಕ್ಕಮಗಳೂರು ಲೋಕಾಯುಕ್ತ ಡಿ.ವೈ.ಎಸ್ಪಿ.ಪಿ. ತಿರುಮಲೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು,
ಚಿಕ್ಕಮಗಳೂರು ಲೋಕಾಯುಕ್ತ ಕಚೇರಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


