ಮೂಡಿಗೆರೆ ಬ್ಲಾಕ್ ಕಾಂಗ್ರೆಸ್ ನೂತನ ಹಂಗಾಮಿ ಅಧ್ಯಕ್ಷರಾಗಿ ನೇಮಕವಾಗಿರುವ ಕೆ.ಎ.ರವಿ ಕುನ್ನಹಳ್ಳಿ ಅವರಿಗೆ ಸ್ವಗ್ರಾಮ ಕುನ್ನಹಳ್ಳಿಯಲ್ಲಿ ಗ್ರಾಮಸ್ಥರು ಅಭಿಮಾನದ ಸನ್ಮಾನ ನೀಡಿ ಗೌರವಿಸಿದರು.
ಗುರುವಾರ ಕುನ್ನಹಳ್ಳಿ ಸಮುದಾಯ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಗ್ರಾಮಸ್ಥರೆಲ್ಲಾ ಸೇರಿ ಕೆ.ಎ. ರವಿ ದಂಪತಿಗಳನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ವಿವಿಧ ಸಂಘ ಸಂಸ್ಥೆಗಳ ಮತ್ತು ರಾಜಕೀಯ ಪಕ್ಷಗಳ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದು, ಶುಭ ಹಾರೈಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಕೆ.ಎ.ರವಿಯವರು ; ಗ್ರಾಮದ ಜನರು ತಮ್ಮ ಮೇಲೆ ತೋರಿರುವ ಪ್ರೀತಿಗೆ ಧನ್ಯವಾದ ಸಲ್ಲಿಸಿದರು. ತನಗೆ ಸಿಕ್ಕಿರುವ ಹೊಸ ಜವಾಬ್ದಾರಿಯಲ್ಲಿ ಜನರ ಸೇವೆಗೆ ಮತ್ತು ಕಾಂಗ್ರೇಸ್ ಪಕ್ಷದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಿ ಗ್ರಾಮದ ಗೌರವವನ್ನು ಕಾಪಾಡುವುದಾಗಿ ತಿಳಿಸಿದರು.


