ತುಂಗಾ ನದಿಗೆ ಯುವಕನೊಬ್ಬ ಬಿದ್ದು ಸಾವನ್ನಪ್ಪಿದ ಘಟನೆ ಶೃಂಗೇರಿ ತಾಲೂಕಿನ ಹಾಲಂದೂರು ಗ್ರಾಮದಲ್ಲಿ ನಡೆದಿದೆ.
ಪ್ರತೀಕ್ (30) ನದಿಗೆ ಬಿದ್ದು ಸಾವನ್ನಪ್ಪಿದ ದುರ್ದೈವಿ. ಪ್ರತೀಕ್ ಪೋಟೋ ತೆಗೆಯಲು ಹೋದಾಗ ಜಾರಿ ನದಿಗೆ ಬಿದ್ದಿರೋ ಶಂಕೆ ವ್ಯಕ್ತವಾಗಿದೆ. ಮೃತದೇಹವನ್ನು ಈಶ್ವರ್ ಮಲ್ಪೆ ಹಾಗೂ ಅಗ್ನಿಶಾಮಕ ಸಿಬ್ಬಂದಿ ನದಿಯಿಂದ ಹೊರತೆಗೆದಿದ್ದಾರೆ.
ಈ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


