ವಿಧಾನ ಪರಿಷತ್ ಉಪಸಭಾಪತಿಗಳಾದ ಎಂ.ಕೆ. ಪ್ರಾಣೇಶ್ ತಮ್ಮ ವಿಧಾನ ಪರಿಷತ್ ಸದಸ್ಯರ ಅನುದಾನದಲ್ಲಿ ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ವಿತರಣೆ ಮಾಡಿದ್ದಾರೆ.
ಇಂದು ಮೂಡಿಗೆರೆ ತಾಲೂಕು ಪಂಚಾಯಿತಿ ಆವರಣದಲ್ಲಿ ಒಟ್ಟು 10ಲಕ್ಷ ವೆಚ್ಚದಲ್ಲಿ 13 ಮಂದಿ ವಿಶೇಷ ಚೇತನರಿಗೆ ತ್ರಿಚಕ್ರ ಸ್ಕೂಟಿ ವಾಹನ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಣೇಶ್ ಅವರು ಅಂಗವಿಕಲತೆಯಿಂದ ಯಾರೂ ಆತ್ಮವಿಶ್ವಾಸ ಕಳೆದುಕೊಳ್ಳಬಾರದು, ಛಲದಿಂದ ಜೀವನದಲ್ಲಿ ಸಾಧನೆ ಮಾಡಬೇಕು, ವಿಶೇಷ ಚೇತನರಿಗೆ ಸರ್ಕಾರ ಹಲವು ಸೌಲಭ್ಯ ನೀಡುತ್ತಿದೆ. ಅವುಗಳನ್ನು ಸದುಪಯೋಗಪಡಿಸಿಕೊಂಡು ಮುಂದೆ ಬರಬೇಕು ಎಂದು ಸಲಹೆ ನೀಡಿದರು.



