ಮೂಡಿಗೆರೆ ರೋಟರಿ ಕ್ಲಬ್, ರೋಟರ್ಯಾಕ್ಟ್, ಎನ್.ಎಸ್.ಎಸ್. ಘಟಕ ತೋಟಗಾರಿಕಾ ಮಹಾವಿದ್ಯಾಲಯ ಸಹಯೋಗದಲ್ಲಿ ಮೂಡಿಗೆರೆ ಹ್ಯಾಂಡ್ ಪೋಸ್ಟ್ ತೋಟಗಾರಿಕಾ ಮಹಾವಿದ್ಯಾಲಯದಲ್ಲಿ ದಿನಾಂಕ 30-12-2023ರಂದು ಸ್ವಯಂಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.
ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯರು ಮತ್ತು ತಾಂತ್ರಿಕ ಸಿಬ್ಬಂದಿಗಳು ದಾನಿಗಳಿಂದ ರಕ್ತಸಂಗ್ರಹ ಮಾಡಿದರು.
ಮೂಡಿಗೆರೆ ರೋಟರಿ ಕ್ಲಬ್ ಅಧ್ಯಕ್ಷ ಹೆಚ್.ಆರ್. ಪ್ರದೀಪ್ ದುಂಡುಗ, ಸಂಸ್ಥೆಯ ಪದಾಧಿಕಾರಿಗಳು, ಮಹಾವಿದ್ಯಾಲಯದ ಡೀನ್ ಡಾ. ನಾರಾಯಣ ಮಾವಾರ್ಕರ್ ಹಾಗೂ ಪ್ರಾದ್ಯಾಪಕರು ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು.





