ಚಾರ್ಮಾಡಿ ಘಾಟಿಯಲ್ಲಿ ನಿನ್ನೆ ರಾತ್ರಿ ಕೆ.ಎಸ್.ಆರ್.ಟಿ.ಸಿ. ಬಸ್ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಧರ್ಮಸ್ಥಳ ದಿಂದಾ ಹರಪನಳ್ಳಿ ಗೆ ಹೋಗುತ್ತಿದ್ದ ಸರಕಾರಿ ಬಸ್ ಉಜಿರೆ ಯಿಂದಾ ಮಾಗುಂಡಿ ಕಡೆಗೆ ಹೋಗುತ್ತಿದ್ದ ಸ್ಕೂಟಿ ನಡುವೆ ಅಪಘಾತ. ಮಳೆಸುರಿಯುತ್ತಿದ್ದುದು ಈ ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ಚಾರ್ಮಾಡಿ ಘಾಟ್ ನ ಮೂರನೇ ತಿರುವಿನಲ್ಲಿ ಅಪಘಾತ ನಡೆದಿದ್ದು ಸ್ಕೂಟಿ ಬಸ್ಸಿಗೆ ಡಿಕ್ಕಿಯಾಗಿ ಸ್ಕೂಟಿ ಸವಾರ ಬಸ್ ಅಡಿಯಲ್ಲಿ ಸಿಲುಕಿಕೊಂಡ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಮೂಡಿಗೆರೆ ತಾಲ್ಲೂಕಿನ ಮಾಗುಂಡಿ ಗ್ರಾಮದ ಮಹಮ್ಮದ್ ಇರ್ಫಾನ್ ಎಂದು ತಿಳುದುಬಂದಿದೆ.
ಇನ್ನೋರ್ವ ಗಂಭೀರ ಗಾಯವಾಗಿದ್ದು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.



