benki 1

 

 

ರಾಜ್ಯ ಹೆದ್ದಾರಿಯ ಬದಿ ಒಣಗಿ ನಿಂತಿದ್ದ ಮರಕ್ಕೆ ವಿದ್ಯುತ್ ತಂತಿ ಬೆಂಕಿ ಉರಿದ ಘಟನೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಹಾದಿಓಣಿ ಗ್ರಾಮದಲ್ಲಿ ನಡೆದಿದೆ.

ಬಾಳೆಹೊನ್ನೂರು,ಕೊಟ್ಟಿಗೆಹಾರ, ಹೊರನಾಡು ಪ್ರವಾಸಿ ತಾಣಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಇದಾಗಿದ್ದು ನೂರಾರು ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತವೆ.ಮರಕ್ಕೆ ಬೆಂಕಿ ಹಿಡಿದು ಅದರ ಕೊಂಬೆ ರಸ್ತೆಯಲ್ಲಿ ಓಡಾಡುವ ವಾಹನಗಳ ಮೇಲೆ ಬಿದ್ದಿದ್ದರೆ ಬಾರಿ ಅನಾಹುತ ಸಂಭವಿಸುತ್ತಿತ್ತು.

ಆದರೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಸ್ಥಳಿಯ ಗ್ರಾಮ ಪಂಚಾಯಿತಿ ಸದಸ್ಯ ನವೀನ್ ಹಾವಳಿ ಇದನ್ನು ಗಮನಿಸಿ ಬಾಳೂರು ಮೆಸ್ಕಾಂ ಕಚೇರಿಗೆ ಮಾಹಿತಿ ನೀಡಿ ಮುಂದೆ ಆಗುವಂತಹ ಅನಾಹುತ ತಪ್ಪಿಸಿದ್ದಾರೆ.

ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿಗಳು ಆಗಮಿಸಿ ಆ ಭಾಗದಲ್ಲಿ ವಿದ್ಯುತ್ ತಂತಿಗಳಿಗೆ ತಾಗುತ್ತಿದ್ದ ಹಲವು ಮರಗಳ ಕೊಂಬೆಗಳನ್ನು ತೆರವುಗೊಳಿಸಿದರು.


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ