ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಅನೇಕ ಕಡೆ ಜನಜೀವನ ಅಸ್ತವ್ಯಸ್ತವಾಗಿದೆ. ಮಳೆಯಿಂದಾಗಿ ಇಂದು ಜಿಲ್ಲೆಯ ಆರು ತಾಲ್ಲೂಕಿಗಳ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮಳೆ ಹಾಗೂ ಮಂಜುಕವಿದ ವಾತಾವರಣದಿಂದ ಚಾಲಕನ ನಿಯಂತ್ರಣ ತಪ್ಪಿ ಎರಡೂ ವಾಹನಗಳು ಪಲ್ಟಿ ಹೇಮಾವತಿ ನದಿಗೆ ಪಲ್ಟಿಯಾಗಿವೆ.
ಮೂಡಿಗೆರೆ ತಾಲ್ಲೂಕಿನ ಬಣಕಲ್ ಸಮೀಪ ಹೇಮಾವತಿ ನದಿಗೆ ಶಿಫ್ಟ್ ಕಾರ್ ಮತ್ತೊಂದು ಇನೋವಾ ಕಾರ್ ಪಲ್ಟಿ ಯಾಗಿದೆ.
ಇನೋವಾ ಕಾರಿನ ಪ್ರಯಾಣಿಕರು ಪುತ್ತೂರು ನಿಂದಾ ಚಿಕ್ಕಮಗಳೂರು ಹೋಗುತ್ತಿದ್ದ ಸಮಯದಲ್ಲಿ ನಡೆದ ಅವಘಡ
ಸಣ್ಣ ಪುಟ್ಟ ಗಾಯಾಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.

ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿ ವ್ಯಾಪ್ತಿಯ ಚಕ್ಕುಡಿಗೆ ಗ್ರಾಮದಲ್ಲಿ ಮರವೊಂದು ಮನೆಯ ಮೇಲೆ ಬಿದ್ದು ಮನೆ ಭಾಗಶಃ ಹಾನಿಗೊಳಗಾಗಿದೆ.
ಚಕ್ಕುಡಿಗೆ ಗ್ರಾಮದ ಯು.ಎ.ಸುದರ್ಶನ್ ಅವರ ಮನೆಗೆ ನೆನ್ನೆ ಸುರಿದ ಬಾರಿ ಗಾಳಿ ಮಳೆಗೆ ಬಾರಿ ಗಾತ್ರದ ಮರವೊಂದು ಮನೆಯ ಮೇಲೆ ಬಿದ್ದು ಭಾಗಶಃ ಹಾನಿಯಾಗಿರುತ್ತದೆ.



