ಮೂಡಿಗೆರೆ ತಾಲ್ಲೂಕಿನ ಬಣಕಲ್ ಸಮೀಪದ ಸಬ್ಬೇನಹಳ್ಳಿ ರಾಷ್ಟ್ರೀಯ ಹೆದ್ದಾರಿ ಬಳಿ ಬೈಕ್ ಮತ್ತು ಆಂಬುಲೆನ್ಸ್ ಮೂಕಾಮುಕಿ ಡಿಕ್ಕಿಯಾಗಿ ಬೈಕ್ ಸವಾರ ತೀವ್ರ ಗಾಯಗೊಂಡಿದ್ದಾರೆ.
ಅಂಬುಲೆನ್ಸ್ ಮೂಡಿಗೆರೆ ಭಾಗದಿಂದ ಉಡುಪಿಗೆ ತೆರಳುತ್ತಿದ್ದು ಬೈಕ್ ಕೊಟ್ಟಿಗೆಹಾರ ಕಡೆಯಿಂದ ಬೇಲೂರು ಕಡೆಗೆ ತೆರಳುತ್ತಿತ್ತು ಎನ್ನಲಾಗಿದೆ.
ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನುಜ್ಜುಗುಜ್ಜಾಗಿದೆ. ಬೈಕ್ ನಲ್ಲಿ ಇದ್ದ ಇಬ್ಬರಿಗೂ ತೀವ್ರವಾಗಿ ಪೆಟ್ಟಾಗಿದೆ.ಚಾಲಕನ ಕಾಲು ಮುರಿದಿದ್ದು ಮತ್ತೋರ್ವ ಸಹ ಚಾಲಕನಿಗೆ ತೀವ್ರ ಗಾಯವಾಗಿದೆ.
ಮೂಡಿಗೆರೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹಾಸನ ಆಸ್ಪತ್ರೆಗೆ ರವಾನಿಸಲಾಗಿದೆ.ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



