ಮೂಡಿಗೆರೆ ತಾಲ್ಲೂಕು ಕಸಬಾ ಹೋಬಳಿ ಬಾಳೇಹಳ್ಳಿ ಗ್ರಾಮದ ದಿವಂಗತ ಶೇಷೇಗೌಡ ಅವರ ಧರ್ಮಪತ್ನಿ, ಹಿರಿಯ ಕಾಫಿ ಬೆಳೆಗಾರರಾಗಿದ್ದ ಶ್ರೀಮತಿ ಪಾರ್ವತಮ್ಮ ಇಂದು ಮುಂಜಾನೆ ನಿಧನ ಹೊಂದಿದ್ದಾರೆ.
ಪಾರ್ವತಮ್ಮ ಅವರಿಗೆ 90 ವರ್ಷ ವಯಸ್ಸಾಗಿತ್ತು. ಅವರ ಅಂತ್ಯಸಂಸ್ಕಾರ ಎಂದು ಸಂಜೆ 4 ಗಂಟೆಗೆ ಬಾಳೆಹಳ್ಳಿಯಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಪಾರ್ವತಮ್ಮ ಅವರು ಪುತ್ರ ಬಿದರಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎಸ್. ನಾಗರಾಜ್ ಗೌಡ ಹಾಗೂ ನಾಲ್ವರು ಪುತ್ರಿಯರು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಪಾರ್ವತಮ್ಮ ಅವರ ನಿಧನಕ್ಕೆ ಕರ್ನಾಟಕ ಬೆಳಗಾರರ ಒಕ್ಕೂಟದ ಮಾಜಿ ಅಧ್ಯಕ್ಷ ಬಿ.ಎಸ್. ಜಯರಾಮ್, ಮೂಡಿಗೆರೆ ತಾಲೂಕು ಬೆಳೆಗಾರರ ಸಂಘದ ಅಧ್ಯಕ್ಷ ಬಿ. ಆರ್. ಬಾಲಕೃಷ್ಣ, ಕಾರ್ಯದರ್ಶಿ ಮನೋಹರ್ ಸೇರಿದಂತೆ ಹಲವು ಗಣ್ಯರು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.



